ಚಿತ್ರ
Optimized Image
News Tag
Promote
No
Top News
Yes
Send Notification
No
Stringer
sagar1
Stringer Special News
No
Hide Ads
No
ವಿವರಣೆ , ವಿಷಯ ,ಮಾಹಿತಿ

ಬೆಂಗಳೂರು:ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಕೆ.ಆರ್.ಪುರ ವಲಯದಲ್ಲಿ ವಿಭಿನ್ನ ರೀತಿಯಲ್ಲಿ ಜಂಕ್ಷನ್ ಗಳನ್ನು ಅಭಿವೃದ್ಧಿಪಡಿಸುವ ಕುರಿತು ಕಾರ್ಯಸಾಧ್ಯತೆ ಬಗ್ಗೆ ಪರಿಶೀಲಿಸುವ ಸಲುವಾಗಿ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ರವರು ಇಂದು ಸ್ಥಳ ಪರಿಶೀಲನೆಯನ್ನು ನಡೆಸಿದರು.

ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೆ.ಆರ್.ಪುರ ಮತ್ತು ವಿಜ್ಞಾನನಗರ ಜಂಕ್ಷನ್ಗಳನ್ನು ಪರಿಶೀಲನೆ ನಡೆಸಿದ ಅಪರ ಆಯುಕ್ತರು ವಿಭಿನ್ನ ರೀತಿಯಲ್ಲಿ ಹಾಗೂ ಸಂಚಾರ ದಟ್ಟಣೆ ಉಂಟಾಗದಂತೆ ವೈಜ್ಞಾನಿಕವಾಗಿ ಜಂಕ್ಷನ್ ಗಳ ಅಭಿವೃದ್ಧಿಪಡಿಸಲು ಸಂಚಾರಿ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯಸಾಧ್ಯತೆ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಅಪರ ಆಯುಕ್ತರು ಸೂಚಿಸಿದರು.

ರಸ್ತೆ ಬದಿಯಲ್ಲಿ ಮತ್ತು ಪಾದಚಾರಿ ಮಾರ್ಗದಲ್ಲಿ ನೆಡಲಾಗಿರುವ ವೃಕ್ಷಗಳ ಸುತ್ತಲೂ ಕಾಂಕ್ರೀಟ್, ಡಾಂಬರು ಹಾಗೂ ಇಂಟರ್ ಲಾಕ್ ಪೇವರ್ ಅಳವಡಿಸುವುದರಿಂದ ಮರಗಳ ಬೇರು ಸದೃಢತೆ ಕಳೆದುಕೊಂಡು ಮಳೆ ಮತ್ತು ಗಾಳಿಯಿಂದಾಗಿ ಉರುಳಿ ಪ್ರಾಣಹಾನಿ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮರಗಳ ಸಂರಕ್ಷಣೆಗಾಗಿ ಮಹತ್ವದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಆಯುಕ್ತರು ಸೂಚಿಸಿದರು.

 

Keywords
Bengaluru junction development, K.R. Puram traffic, Vignan Nagar intersection, Lokhande Snehal Sudhakar, Bengaluru traffic management, tree protection Bengaluru, urban planning Bengaluru, road infrastructure, traffic congestion solution, East Bengaluru development, civic infrastructure, BBMP news, city beautification, sustainable urban development, tree conservation
Language
Kannada
Kannada